ವಿಜಯಪುರ: ಹೈವೇ ದರೋಡೆಕೋರನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ನಗರದ ಬಸ್ ನಿಲ್ದಾಣದ ಬಳಿಯ ನಯೇರಾ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ನಬಿರಸೂಲ ಜಿಲಾನಿ ಕೋರವಾರ, ಅವಿನಾಶ ರಮೇಶ ಬಾಗಡೆ, ಅಲ್ತಾಫ್ ಕುತುಬುದ್ದೀನ್ ಐನಾಪುರ, ಮತೀನ ಖಲೀಲಅಹ್ಮದ್ ಖಾಜಿ, ಸಮೀರ ಅಬ್ದುಲ್ ರಜಾಕ್ ಯರಗಲ್ ಬಂಧಿತ ದರೋಡೆಕೋರತು.
ಇನ್ನು ಸರ್ಫರಾಜ್ ಎಸ್ಕೆ ಪರಾರಿಯಾಗಿದ್ದಾನೆ. ಬಂಧಿತರಿಂದ 1.5 ಲಕ್ಷ ಮೌಲ್ಯದ ಟವೇರಾ ವಾಹನ, 3 ಕಬ್ಬಿಣದ ರಾಡ್, 5 ಮಂಕಿ ಕ್ಯಾಪ್ಗಳು, ಹಗ್ಗ, ಖಾರದ ಪುಡಿ, ಒಂದು ಚಾಕು ಜಪ್ತಿಗೈದಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.