ವಿಜಯಪುರ: ವಿಜಯಪುರ: ಹತ್ತಿ ಬಿಡಿಸಲು ಕೂಲಿ ಕೆಲಸಕ್ಕೆ ವಾಹನದಲ್ಲಿ ತೆರಳುತ್ತಿದ್ದ ವಾಹನ ಪಲ್ಟಿಯಾಗರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿ ನಡೆದಿದೆ. ಬೊಲೆರೋ ಪಿಕಪ್ ವಾಹನ ಪಲ್ಟಿಯಲ್ಲಿ 14 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರು ತಾಳಿಕೋಟೆ ತಾಲೂಕಿನ ಬಿಳೆಭಾವಿ ಗ್ರಾಮದವರು ಎಂದು ಗುರುತಿಸಲಾಗಿದೆ. ಬಿಳೇಭಾವಿ ಗ್ರಾಮದಿಂದ ತುಂಬಗಿ ಗ್ರಾಮಕ್ಕೆ ಹತ್ತಿ ಬಿಡಿಸಲು ಕೂಲಿ ಕೆಲಸಕ್ಕೆಂದು ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವಾಹನದ ಜಾಯಿಂಟ್ ಕಟ್ ಆದ ಪರಿಣಾಮ ಈ ಘಟನೆ ಆಗಿದರ. ಗಾಯಾಳುಗಳಿಗೆ ತಾಳಿಕೋಟೆ ಪಟ್ಟಣದ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತಾಳಿಕೋಟಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.