ವಿಜಯಪುರ: ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾಗಿರುವ ಪರಿಣಾಮ 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಲೋಯಲಾ ಶಾಲೆಯ ಹತ್ತಿರ ನಡೆದಿದೆ. ಬೇವಿನಾಳ ಗ್ರಾಮದಿಂದ ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮದ ಭಾಗ್ಯವಂತಿ ದೇವಿ ದೇವಸ್ಥಾನಕ್ಕೆ ಜಾವಳ ಕಾರ್ಯಕ್ರಮಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಲಕ್ಷ್ಮೀ ಶೇಗುಣಸಿ, ದ್ರಾಕ್ಷಾಯಿಣಿ ಹಿರೇಮಠ, ಅನುರಾಧಾ ಮೇಟಿ, ನೀಲವ್ವ ಮೇಟಿ ಸೇರಿದಂತೆ 15 ಜನ ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸಿಂದಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.