ವಿಜಯಪುರ: ತವರು ಮನೆಯಿಂದ ಗಂಡನ ಮನೆಗೆ ಹೋಗುತ್ತೇನೆ ಎಂದು ಹೋಗಿದ್ದ ತಾಯಿ, ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದಿದೆ.
28 ವರ್ಷದ ಸೂರವ್ವ ಸುರೇಶ ಹಿರೇಕುರುಬರ, ಸಿದ್ಧಾರ್ಥ್, ಸಮರ್ಥ ನಾಪತ್ತೆಯಾಗಿದ್ದಾರೆ. ಇನ್ನು ತಿಕೋಟಾದಿಂದ ಗಂಡನ ಮನೆಗೆ ಹೋಗುತ್ತೇನೆ ಎಂದು ತಾಯಿ, ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ಸುತ್ತಮುತ್ತಲಿನ ಕಡೆಗೆ ವಿಚಾರಿಸಿದ್ರೂ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ತಿಕೋಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.