ವಿಜಯಪುರ: ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆಗೈದು ಭೀಮಾನದಿಗೆ ಎಸೆದಿರುವ ಘಟನೆ ವಿಜಯಪುರ ಜಿಲ್ಲೆಯ ನೆರೆಯ ಮಂದ್ರೂಪ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವ್ಯಕ್ತಿಯನ್ನ ಹತ್ಯೆ ಮಾಡಿ ಭೀಮಾನದಿಗೆ ಖದೀಮರು ಎಸೆದು ಪರಾರಿಯಾಗಿದ್ದಾರೆ. ಇನ್ನು ಹತ್ಯೆಯಾದ ವ್ಯಕ್ತಿಯ ಗುರುತು ಪತ್ತೆಗೆ ಮಂದ್ರೂಪ ಠಾಣಾ ಪೊಲೀಸರು ಮುಂದಾಗಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿ, ಶವಕ್ಕೆ ಕಲ್ಲು ಕಟ್ಟಿ ಭೀಮಾನದಿಗೆ ಎಸೆದಿದ್ದಾರೆ. ಇನ್ನು ವಿಜಯಪುರ ಜಿಲ್ಲೆಗೆ ಸೇರಿದ ವ್ಯಕ್ತಿಯ ಹತ್ಯೆ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.