ವಿಜಯಪುರ: ಹಳೇ ವೈಷಮ್ಯದಿಂದಾಗಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ನಗರದ ಜಾಮೀಯಾ ಮಸೀದಿ ಬಳಿ ನಡೆದಿದೆ. ಪೇಟಿ ಬಾವಡಿ ನಿವಾಸಿ ರಜೀನ್ ಜಮಾದಾರ್ ( 27 )ಕೊಲೆಯಾದ ಯುವಕ. ಹಳೆಯ ವೈಷಮ್ಯವೇ ಈ ಘಟನೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಗೋಲಗುಮ್ಮಟ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.