ವಿಜಯಪುರ: ನನ್ನ ಹೋರಾಟ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಅಲ್ಲ. ನನ್ನ ಹೋರಾಟ ಅಭಿವೃದ್ಧಿಗಾಗಿ ಮಾತ್ರ ಎಂದು ಪಕ್ಷೇತರ ಅಭ್ಯರ್ಥಿ ರವಿಕಾಂತ ಬಗಲಿ ಹೇಳಿದರು.
ವಿಜಯಪುರ ನಗರದ ವಾರ್ಡ್ ನಂಬರ 22ರ ಪಕ್ಷೇತರ ಅಭ್ಯರ್ಥಿ ರವಿಕಾಂತ ಬಗಲಿ ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಮಾಡಿದರು. ನಗರದ ಐನಾಪುರ ಕ್ರಾಸ್ ಬಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಬಗಲಿ ತಮಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನಾನು ನಿಮ್ಮ ಮನೆ ಮಗ. ಅದಕ್ಕಾಗಿ ನನಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಎಂದು ಮನವಿ ಮಾಡಿದರು.