ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವೈಫಲ್ಯದಿಂದ ಬಿಜೆಪಿಗೆ ಸೋಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರ ನಗರದಲ್ಲಿ ಶನಿವಾರ ಮಾಧ್ಯಮದ ಎದುರು ಮಾತನಾಡಿದ ಅವರು, ಬಿಜೆಪಿ ಸೋಲಿನ ಹಿನ್ನೆಲೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಲ್ಲದೇ, ರಾಜ್ಯ ಜನರ ತೀರ್ಪಿಗೆ ನಾವು ತಲೆಬಾಗಲೇಬೇಕು. ಅದಕ್ಕಾಗಿ ಬರುವ ಲೋಕಸಭಾ ಚುನಾವಣೆ ವೇಳೆ ತಿದ್ದಿಕೊಂಡು ಹೋರಾಟ ಮಾಡುತ್ತೇವೆ ಎಂದರು. ಇನ್ನು ಶಾಸಕ ಯತ್ನಾಳ್ ಗೆಲುವು ಹಿನ್ನೆಲೆ ವಿಜಯಪುರ ನಗರದಲ್ಲಿ ಯತ್ನಾಳ ಅಭಿಮಾನಿಗಳು, ಕಾರ್ಯಕರ್ತರು ವಿಜಯೋತ್ಸವ ಮಾಡಿದರು. ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಅಭಿಮಾನಿಗಳು ಕೇಸರಿ ಗುಲಾಲ್ ಆಡಿದರು. ಹಿಂದೂ ಸಂಘಟನೆಗಳಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ. ನಗರದ ಸಿದ್ದೇಶ್ವರ ದೇವಸ್ಥಾನದ ಬಳಿ ಸಾವಿರಾರು ಜನರು ಜಮಾಯಿಸಿ ಸಂಭ್ರಮಿಸಿದ್ದರು.
ನನ್ನ ಕಾರ್ಯಕರ್ತರೇ ನನ್ನ ಹಿರೋ : ಯತ್ನಾಳ
![](https://karnataka1news.com/wp-content/uploads/2023/05/IMG-20230513-WA0067-860x387.jpg)