ವಿಜಯಪುರ: ನಾವು ಸರ್ಕಾರಕ್ಕೆ ಡೆಡ್ಲೈನ್ ನೀಡಲ್ಲ. ನಮ್ದು ಲೈಪ್ಟೈಮ್ ಹೋರಾಟ ಆಗಿದೆ ಎಂದು ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀ ಹೇಳಿದರು.
ವಿಜಯಪುರ ನಗರದಲ್ಲಿ ರವಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಹಿರಂಗ ಚರ್ಚೆ ನಡೆಸಲಾಗಿದೆ. ಬೊಮ್ಮಾಯಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ 2 ಎ ಪಂಚಮಸಾಲಿ ಸಮುದಾಯದ ಮೀಸಲಾತಿ ಘೋಷಣೆಯಾಗಲಿದೆ. ಈಗಾಗಲೇ ವರದಿ ಸಿದ್ದಗೊಂಡಿದ್ದು, ಸದನದಲ್ಲಿ ಮಂಡನೆಯಾಗಿ ಮೀಸಲಾತಿ ಘೋಷಣೆಯಾಗುವ ಭರವಸೆ ಇದೆ ಎಂದು.