ವಿಜಯಪುರ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿ ಜಂಗಮ ಸಮಾಜದಿಂದ ಪ್ರತಿಭಟನೆ ನಡೆಸಿದರು. ನೇಹಾ ಹಂತಕನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಪ್ರತಿಭಟನೆಯಲ್ಲಿ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು. ಕೊಲೆಗಡುಕನನ್ನು ತಕ್ಷಣವೇ ಗಲ್ಲಿಗೇರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಜಂಗಮ ಹಾಗೂ ಹಿಂದೂ ಸಮಾಜದಿಂದ ಪ್ರತಿಭಟನೆ ನಡೆಸಿದರು. ಇನ್ನು ಕೊಲೆಗಾರ ಫಯಾಜ್ನ್ನು ಗಲ್ಲು ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು. ತಕ್ಷಣವೇ ರಾಜ್ಯ ಸರ್ಕಾರ ಆರೋಪಿ ಫಯಾಜ್ಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.