ಧಾರವಾಡ: ಧಾರವಾಡ: ಬೈಕ್ಗೆ ಟ್ಯಾಂಕರ್ ಡಿಕ್ಕಿಯಾಗಿರುವ ಪರಿಣಾಮ ಅಧಿಕಾರಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಶಿಂಗನಳ್ಳಿ ಕ್ರಾಸ್ ಬಳಿ ನಡೆದಿದೆ. ಪಶು ಸಂಗೋಪನಾ ಇಲಾಖೆಯಲ್ಲಿ ಪಶು ವೈದ್ಯಕೀಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಚಾಂದಸಾಬ್ ಕಿರೇಸೂರ ಮೃತಪಟ್ಟಿರುವ ದುರ್ದೈವಿ. ತಾಲೂಕಾ ದೇವೇಂದ್ರಪ್ಪ ಪಶುವೈದ್ಯಾಧಿಕಾರಿ ಲಮಾಣಿ, ಕಲಘಟಗಿ ಸಿಪಿಐ ಶ್ರೀಶೈಲ ಕೌಜಲಗಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ಯಾಂಕರ್ ವಾಹನ ಚಾಲಕ ಪರಾರಿಯಾಗಿದ್ದು, ಅವರ ಬಂಧನಕ್ಕೆ ಜಾಲ ಬಿಸಿದ್ದಾರೆ. ಕಲಘಟಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.