ವಿಜಯಪುರ: ಸರ್ಕಾರಿ ರಾಜಹಂಸ ಬಸ್ ಹಾಗೂ ಬುಲೆರೋ ಕಾರ್ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬುಲೆರೋದಲ್ಲಿದ್ದ ಓರ್ವ ಸ್ಥಳದಲ್ಲಿ ಸಾವು, ಇತರೆ ನಾಲ್ವರಿಗೆ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ.
ಮೃತನನ್ನು ಓರಿಸ್ಸಾ ಮೂಲದ ಸುಂದರಘಡ ಜಿಲ್ಲೆಯ ಸಂದೀಪ ನಾಯಕ್ ಎಂದು ಗುರುತಿಸಲಾಗಿದೆ. ಗಾಯಾಳು ನಾಲ್ವರನ್ನು ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಬುಲೆರೋ ಕಾರ್ ಚಾಲಕನ ಅಜಾಗರೂಕತೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.