ವಿಜಯಪುರ: ಬೃಹತ್ ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಡೋಣಿ ಸೇತುವೆ ಬಳಿ ನಡೆದಿದೆ.
ರತ್ನಾಪುರದ ಕಲ್ಲಪ್ಪ ಕೇರುಬಾ ಕಟೆ ಮೃತಪಟ್ಟಿರುವ ದುರ್ದೈವಿ. ಇನ್ನೂ ವೃದ್ಧ ಕಲ್ಲಪ್ಪ ಕಟೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ತೀವ್ರ ಪೆಟ್ಟಾಗಿ ಸ್ಥಳದಲ್ಲೆ ಅಸುನೀಗಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.