ದೇವರ ಹೆಸರಲ್ಲಿ ದ್ವೇಷ ಮಾಡುವುದು ಬಿಜೆಪಿಯವರಿಗೆ ಮಾತ್ರ ಗೊತ್ತು; ಸವದತ್ತಿಯಲ್ಲಿ ಬಿಜೆಪಿ ವಿರುದ್ದ ಸಿಎಂ ವಾಗ್ದಾಳಿ

Madiwal
By Madiwal
ದೇವರ ಹೆಸರಲ್ಲಿ ದ್ವೇಷ ಮಾಡುವುದು ಬಿಜೆಪಿಯವರಿಗೆ ಮಾತ್ರ ಗೊತ್ತು; ಸವದತ್ತಿಯಲ್ಲಿ ಬಿಜೆಪಿ ವಿರುದ್ದ  ಸಿಎಂ  ವಾಗ್ದಾಳಿ

ಬೆಂಗಳೂರು:

ನಮ್ಮ ದೇಶದಲ್ಲಿ ಹಲವಾರು ಧರ್ಮದ ಜನರು,ಹಲವಾರು ಜಾತಿಯ ಜನರು ಜೀನವ ಸಾಗಿಸುತ್ತಾರೆ,ಇಲ್ಲಿ ಇರುವ ಜನಸಾಮಾನ್ಯರು ಎಲ್ಲರೂ ಅವರ ಅವರ ಆಚಾರ ವಿಚಾರಗಳು ತಮ್ಮ ತಮ್ಮ ಸಂಪ್ರಧಾಯದಂತೆ ಮಾಡುತ್ತಾ ಬಂದಿದ್ದಾರೆ, ಎಲ್ಲರೂ ಒಂದೇ ದೇಶದ ಮಕ್ಕಳು ಎಂಬ ಭಾವನೆಯಿಂದ ಬದುಕು ಸಾಗಿಸುತ್ತಿದ್ದಾರೆ ಆದರೆ ಬಿಜೆಪಿಯವರು ಮಾತ್ರ ದೇವರ ಹೆಸರಲ್ಲಿ ದ್ವೇಷ  ಮಾಡುತ್ತಾ ಜನರ ಮಧ್ಯೆ ದ್ವೇಷ ಭಾವನೆ ಹುಟ್ಟುವ ಹಾಗೆ ಮಾಡುತ್ತಾ ಬಂದಿದ್ದಾರೆ, ಅದು ಅವರಿಗೆ ಚೆನ್ನಾಗಿ ಗೊತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ದ  ವಾಗ್ದಾಳಿ ನಡೆಸಿದರು.

ಅವರು  ಸವದತ್ತಿಯಲ್ಲಿ ಮಾತನಾಡಿ, ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ.ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ? ದೇವರು-ಧರ್ಮದ ಹೆಸರಲ್ಲಿ ದೇಶವನ್ನು – ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ.

ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದರು. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಮಾಡಿ ಎಂದು ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ಯಾವ ಮನುಷ್ಯರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ ತಾನೆ? ಧರ್ಮದ ಹೆಸರಲಿ ರಾಜಕೀಯ ಮಾಡುವ ಬಿಜೆಪಿಯವರಿಗೆ ಗೊತ್ತಾಗಬೇಕು ಎಂದು ವಾಗ್ದಾಳಿ ನಡೆಸಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";