ವಿಜಯಪುರ: ನಾಳೆ ವಿಜಯಪುರ ನಗರಕ್ಕೆ ಎಐಎಂಐಎಂ ಅಧ್ಯಕ್ಷ ಓವೈಸಿ ಬರುತ್ತಾರೆ ಎಂದು ಎಐಎಂಐಎಂ ಮುಖಂಡ ಕೈಸರಹುಸೇನ್ ಇನಾಮದಾರ್ ಮಾಹಿತಿ ನೀಡಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಈಗಾಗಲೇ ವಿಜಯಪುರಕ್ಕೆ ಬರುವ ಅನುಮತಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಅಧ್ಯಕ್ಷ ಓವೈಸಿ ಬರುತ್ತಿದ್ದಾರೆ. ಇದು ನಮ್ಮ ಹೆಮ್ಮೆಯ ಸಂಗತಿ ಆಗಿದೆ. ನಾಳೆ ಮಧ್ಯಾಹ್ನದ ವೇಳೆಗೆ ನಗರಕ್ಕೆ ಓವೈಸಿ ಬರುತ್ತಿದ್ದು, ತದನಂತರ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆಯಲ್ಲಿ 20 ಮೀಟಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಸಮಸ್ತ ನಾಗರಿಕರು ಸಹಕರಿಸಿ ಕಾರ್ಯಕ್ರಮಕ್ಕೆ ಬರಬೇಕು ಎಂದು ಮನವಿ ಮಾಡಿದರು.