ವಿಜಯಪುರ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಶಾಲಿ ಹಿನ್ನಲೆ ನಗರದ ಗಾಂಧಿಚೌಕ್ ನಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇನ್ನು ಬಿಜೆಪಿ ಮುಖಂಡ ಮಂಚಾಲೇಶ್ಚರಿ ತೊನಶ್ಯಾಳ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ಗುಲಾಲ್ ಹಚ್ಚಿಕೊಂಡು ವಿಜಯೋತ್ಸವ ಮಾಡಿದರು. ಈ ಸಂದರ್ಭದಲ್ಲಿ ಮೋದಿ ಜೈ ಯೋಗಿ ಜೈ ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಮತ್ತೊಂದೆಡೆ ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಶಾಲಿ ಹಿನ್ನಲೆ ನಗರದ ಸಿದ್ಧೇಶ್ವರ ದೇವಸ್ಥಾನ ಎದುರು ಬಿಜೆಪಿ ನಗರ ಮಂಡಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇನ್ನು ಕಾರ್ಯಕರ್ತರಯ ಬುಲ್ಡೋಜರ್ನಲ್ಲಿ ಯೋಗಿ ಆದಿತ್ಯನಾಥ ಭಾವಚಿತ್ರ ಮೆರವಣಿಗೆ ನಡೆಸಿ, ಸಿಹಿ ಹಂಚಿ, ಪಟಾಲಿ ಸಿಡಿಸಿದರು. ಈ ವೇಳೆಯಲ್ಲಿ ಮೋದಿ ಜೈ ಯೋಗಿ ಜೈ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಡ್ಯಾನ್ಸ್ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.