ವಿಜಯಪುರ: ಬಬಲೇಶ್ವರ ಮತಕ್ಷೇತ್ರಕ್ಕೆ ಜನವರಿ 22ರಂದು ಪಂಚರತ್ನ ಯಾತ್ರೆ ಆಗಮಿಸುತ್ತದೆ ಎಂದು ಬಬಲೇಶ್ವರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಸವರಾಜ್ ಹೊನವಾಡ ಹೇಳಿದರು. ವಿಜಯಪುರ ನಗರದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚರತ್ನ ಯಾತ್ರೆ ಅಂದು ಕಾರಜೋಳ ಮೂಲಕ ಬಬಲೇಶ್ವರಕ್ಕೆ ಬರುತ್ತದೆ. ತದನಂತರ ಬಬಲೇಶ್ವರ ಕ್ಷೇತ್ರದಲ್ಲಿ ಯಾತ್ರೆ ನಡೆಯುತ್ತದೆ. ಅಲ್ಲದೇ, ಕುಮಾರಸ್ವಾಮಿ ಸಿಎಂ ಆದ್ರೇ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಯೋಜನೆಯನ್ನು ಜಾರಿಗೆ ಮಾಡಲಾಗುತ್ತದೆ. ಅದಕ್ಕಾಗಿ ಜನತೆ ನಮ್ಮ ಪಕ್ಷಕ್ಕೆ ಮತ ನೀಡಬೇಕು. ಇನ್ನೂ ಬಿಜೆಪಿ, ಕಾಂಗ್ರೆಸ್ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.