ವಿಜಯಪುರ: ವಿಜಯಪುರ: ಪಾದಚಾರಿಗೆ ಲಾರಿ ಡಿಕ್ಕಿ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಅಸುನೀಗಿರುವ ಘಟನೆ ವಿಜಯಪುರ ನಗರದ ಶಿವಗಿರಿ ಬಳಿ ನಡೆದಿದೆ. ಮೃತಪಟ್ಟಿರುವ ಪಾದಚಾರಿಯ ಹೆಸರು ತಿಳಿದುಬಂದಿಲ್ಲ. ಘಟನೆ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.