ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಹುಟ್ಟಿರೋದೆ ಹಿಂದೂರಾಷ್ಟ್ರ ಮಾಡುವುದಕ್ಕಾಗಿ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಷಣದಲ್ಲಿ ಹೇಳಿದರು.
ವಿಜಯಪುರದ ಸಿದ್ದೇಶ್ವರ ದೇವಸ್ಥಾನ ಮುಂಭಾಗದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಾತ್ಮ ಗಾಂಧಿ ದೇಶ ಒಡೆದುಕೊಟ್ಟಿದ್ದಾರೆ. ಪಾಕಿಸ್ತಾನ ಯಾಕೆ ಒಡೆದುಕೊಟ್ರೋ ಗೊತ್ತಿಲ್ಲ. ಆ ಪುಣ್ಯಾತ್ಮ (ಗಾಂಧಿಜಿ) ಮಾಡಿದ ತಪ್ಪಿನಿಂದ ಕೋಟ್ಯಾಂತರ ಹಿಂದೂಗಳು ಸತ್ತರು ಎಂದರು. ಇನ್ನೂ ಮುಂದೇ ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರವೇ ಭಾರತದ ವಶವಾಗಲಿದೆ. ಪ್ರಧಾನಿ ಮೋದಿ ಅಂತಹ ನಾಯಕರ ಇರುವಾಗ ಇದು ಸಾಧ್ಯವಿದೆ ಎಂದರು.