ವಿಜಯಪುರ: ಚುನಾವಣಾ ಕರ್ತವ್ಯ ನಿರತ ವಿಜಯಪುರ ಜಿಲ್ಲೆಯ ಕೊಲ್ಹಾರ ಠಾಣೆಯ ಮುಖ್ಯ ಪೇದೆಯ ಆರೋಗ್ಯದಲ್ಲಿ ಏರು-ಪೇರಾಗಿದ್ದರಿಂದ ಚಿಕಿತ್ಸೆ ಫಲಿಸದೇ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಲ್ಹಾರ ಠಾಣೆಯ ಇಬ್ರಾಹಿಂಸಾಬ ದಾವಲ್ ಸಾಬ ಅವಟಿ (44) ಮೃತಪಟ್ಟ ಮುಖ್ಯ ಪೇದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕೊಲ್ಹಾರ ಠಾಣೆ ವ್ಯಾಪ್ತಿಯಲ್ಲಿ ಫ್ಲಾಯಿಂಗ್ ಸ್ಕ್ವಾಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಆರೋಗ್ಯದಲ್ಲಿ ಏರು-ಪೇರಾಗಿದ್ದರಿಂದ ತಕ್ಷಣವೇ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.