ವಿಜಯಪುರ: ಪ್ರಪಂಚದ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದರೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ, ವರದಿ ಬರುವವರೆಗೂ 07 ದಿನಗಳವರೆಗೆ ಮನೆಯಲಿಯ್ಲೇ ಕ್ವಾರೆಂಟೈನಲ್ಲಿದ್ದು, ಕೋವಿಡ್ ಲಕ್ಷಣಗಳ ಬಗ್ಗೆ ಸ್ವಯಂ ನಿಗಾ ವಹಿಸಬೇಕು. ಈ ಅವಧಿಯಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲಿಸುವುದು.ಡಿ.31 ಹಾಗೂ ಜ.1ರ ರಾತ್ರಿ 01 ಗಂಟೆಯವರೆಗೆ ಹೊಸ ವರ್ಷಾಚರಣೆ ಆಚರಿಸಲು ಅವಕಾಶವಿದೆ. ಹೊಸ ವರ್ಷಾಚರಣೆಗಾಗಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಒಂದೆಡೆ ಸೇರುವ ಸಂದರ್ಭದಲ್ಲಿ, ಅಂತಹ ಕಾರ್ಯಕ್ರಮಗಳನ್ನು ಹಗಲು ಹೊತ್ತಿನಲ್ಲಿ ಹೊರಾಂಗಣ ಪ್ರದೇಶದಲ್ಲಿ ಆಯೋಜಿಸಬೇಕು. ಹೊಟೇಲ್ ರೆಸ್ಟೋರೆಂಟ್,ಕ್ಲಬ್ ರೆಸಾರ್ಟ ಒಳಗೊಂಡಂತೆ ಒಳಾಂಗಣದಲ್ಲಿ ನಿಗದಿಗಿಂತ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸುವಂತಿಲ್ಲ. ಕಾರ್ಯಕ್ರಮ ಆಯೋಜಕರು, ನಿರ್ವಹಣೆ ಮಾಡುವವರು ಹಾಗೂ ಸೇವಾ ಸಿಬ್ಬಂದಿಗಳು ಕೋವಿಡ್-19ರ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದಿರಬೇಕು. ಆದಾಗ್ಯೂ ಎರಡು ಡೋಸ್ ಲಸಿಕೆ ಪಡೆಯುವುದು ಅಗತ್ಯವಾಗಿದೆ.
ಜನದಟ್ಟಣೆಯನ್ನು ನಿಯಂತ್ರಿಸಲು ಪ್ರವೇಶ ದ್ವಾರ ಸಂಖ್ಯೆ ಹೆಚ್ಚಿಸುವುದು. ಒಳಾಂಗಣ ಪ್ರದೇಶದ ಆಚರಣೆಯಲ್ಲಿ ಭಾಗವಹಿಸುವವರು ಕಡ್ಡಾಯ ಮಾಸ್ಕ್ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಮಾಸ್ಕ್ ಧರಿಸದವರಿಗೆ ಪ್ರವೇಶ ನಿಷಿದ್ಧ ಎಂಬ ಮಾಹಿತಿ ಫಲಕ ಅಳವಡಿಸುವುದು. ಪ್ರತಿಯೊಬ್ಬರು ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡುವುದು. ಜ್ವರ ಹಾಗೂ ಉಸಿರಾಟದ ಸಮಸ್ಯೆ ಕೆಮ್ಮು, ಶೀತ ಇತ್ಯಾದಿ ಲಕ್ಷಣಗಳನ್ನು ಹೊಂದಿದವರನ್ನು ವೈದ್ಯರ ಸಲಹೆ ಪಡೆಯಲು ಶಿಫಾರಸ್ಸು ಮಾಡುವುದು. ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ಭಯ ಬೇಡ, ಎಚ್ಚರವಿರಲಿ, ಪ್ರತಿಯೊಬ್ಬರು ಕೋವಿಡ್ ಬೂಸ್ಟರ್ ಲಸಿಕೆ ಪಡೆದುಕೊಳ್ಳುವಂತೆಯೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.