ಹಾಸನ: ಕುಡುಕರು ಅನ್ನಬೇಡಿ, ನಮ್ಮನ್ನು ಮದ್ಯಪ್ರಿಯರು ಅನ್ನಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಹೇಳಿದರು.
ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯಪಾನ ಪ್ರಿಯರಿಗೆ ಇನ್ಸೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು ಎಂದರು. ಅಲ್ಲದೇ, ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು. ಕುಡಿದು ಹೆಚ್ಚಾಗಿ ಬಾರ್ನಲ್ಲಿ ಮಲಗಿದರೆ ಅವರನ್ನು ಆಚೆ ಕಳುಹಿಸಬಾರದು. ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ಅವಕಾನ ಮಾಡಿಕೊಡಬೇಕು.
ಮದ್ಯಪಾನ ನಿಗಮ ಮಂಡಳಿ ರಚಿಸಬೇಕು, ಮದ್ಯ ಪ್ರಿಯರಿಗೆ ಸೈಟ್ ಸೇರಿದಂತೆ 18 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಮದ್ಯಪ್ರಿಯರ 18 ಬೇಡಿಕೆ ಈಡೇರಿಸಬೇಕು.. ಅಧ್ಯಕ್ಷ ವೆಂಕಟೇಶ್…
![](https://karnataka1news.com/wp-content/uploads/2022/12/IMG_20221225_112844.jpg)