ವಿಜಯಪುರ: ಲೋಕಸಭಾ ಚುನಾವಣೆ ಹಿನ್ನಲೆ ನಾಳೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಕೂಚಬಾಳ್ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬಾಗಲಕೋಟ ನಗರದ
ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆ 11ಗಂಟಗೆ ಪ್ರಧಾನಿ ಮೋದಿ ಎಂಟ್ರಿ ಕೊಡತ್ತಾರೆ ಎಂದರು. ಅಲ್ಲದೇ, ಅವಳಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳಾದ ಪಿ.ಸಿ. ಗದ್ದಿಗೌಡರ ಹಾಗೂ ರಮೇಶ ಜಿಗಜಿಣಗಿ ಪರ ಮತ ಬೇಟೆ ಮಾಡುತ್ತಾರೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮನಕ್ಕೆ ಕೂಚಬಾಳ್ ಮನವಿ ಮಾಡಿದರು.