ವಿಜಯಪುರ: ಗುಜರಾತಿನಲ್ಲಿ ಸ್ಪಷ್ಟ ಬಹುಮತ ಗಳಿಸಿದ್ದೇವೆ ಎಂದು ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಇದು ಪ್ರಧಾನಿ ಮೋದಿ ಅವರ ಕೊಡುಗೆಯಾಗಿದೆ. ಗುಜರಾತಿನಲ್ಲಿ ಹಲವಾರು ವರ್ಷಗಳಿಂದ ಬಿಜೆಪಿ ನೆಲೆಯೂರಿದೆ. ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆದಿದ್ದೇವೆ ಎಂದರು.
ಇನ್ನು ಗುಜರಾತ್ ಫಲಿತಾಂಶ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯ ಆಗಲಿದೆ.
ಬರೀ ಕರ್ನಾಟಕಕ್ಕೆ ಅಷ್ಟೇಯಲ್ಲಾ ಮುಂದಿನ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯ ಆಗಲಿದೆ.
ಹಿಮಾಚಲಪ್ರದೇಶದಲ್ಲಿ ಸ್ಥಳಿಯ ಆಡಳಿತ ವಿರೋಧಿ ಅಲೆ ಕಂಡು ಬಂದಿದೆ. ಅಲ್ಲಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದೇವು. ನಮ್ಮ ನಿರೀಕ್ಷೆ ತಕ್ಕ ಸ್ಥಾನಗಳು ಸಿಕ್ಕಿಲ್ಲ ಎಂದರು.