ವಿಜಯಪುರ: 80 ಅಡಿ ಬಾವಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಅಸ್ಲಂ ಮೌಲಾಸಾಹೇಬ್ ನದಾಫ್ನ್ನು ರಕ್ಷಣೆ ಮಾಡಲಾಗಿದೆ. ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದನು. ಮಾಹಿತಿ ಆಧರಿಸಿ ಸಿಂದಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು 80 ಅಡಿ ಬಾವಿಯಲ್ಲಿ ಬಿದ್ದಿದ್ದ ಅಸ್ಲಂನ್ನು ರಕ್ಷಣೆ ಮಾಡಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.