ವಿಜಯಪುರ: 40ಕ್ಕೂ ಅಧಿಕ ಮಧ್ಯಪ್ರದೇಶ ಕಾರ್ಮಿಕರನ್ನು ಭೀಮಾತೀರದ ಪೊಲೀಸರು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ನಡೆದಿದೆ. ಕಾರ್ಮಿಕರನ್ನು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗುಬ್ಬೇವಾಡ ಗ್ರಾಮದ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.
ಅದಕ್ಕಾಗಿರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕಾರ್ಮಿಕರು ಕರೆ ಮಾಡಿದ್ದಾರೆ. ತದನಂತರ ಮಧ್ಯಪ್ರದೇಶದ ಡಿಸಿ ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರಗೆ ಇಂಡಿ ಪೊಲೀಸರು ಮುಕ್ತಿ ನೀಡಿದ್ದಾರೆ. ಇನ್ನು ಬಂಧನದಲ್ಲಿಟ್ಟು 100 ಟನ್ ಕಬ್ಬು ಕಟಾವು ಮಾಡಿದ್ದರು, ಇನ್ನು 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದೀಗ್ ಕಾರ್ಮಿಕರು ಅಲ್ಲಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟರು.