ವಿಜಯಪುರ: ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದರು.
ರಾಣಿ ಚೆನ್ನಮ್ಮ ಸ್ವಾಭಿಮಾನದ ಪ್ರತೀಕ ಆಗಿದೆ. ಅದಕ್ಕಾಗಿ ಇಂಡಿ ತಾಲೂಕು ಮಿನಿ ವಿಧಾನ ಸೌಧದ ಎದುರು ಪುತ್ಥಳಿ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ರಾಜಕೀಯ ಮಾಡುತ್ತಿದ್ದಾರೆ. ಇದು ಖಂಡನೀಯ. ಭೂಮಿ ಪೂಜೆ ನೆರವೇರಿಸಿದ್ದರು. ಈವರೆಗೂ ಆ ಕಾರ್ಯ ಕೈಗೂಡಿಲ್ಲ. ಮಿನಿ ವಿಧಾನ ಸೌಧದ ಆವರಣದಲ್ಲಿಯೇ ಮೂರ್ತಿ ಪ್ರತಿಷ್ಟಾಪಿಸಬೇಕೆಂಬುದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಚೆನ್ನಮ್ಮ ಪುತ್ಥಳಿಗಾಗಿ ಪ್ರತಿಭಟನೆ, ಆಕ್ರೋಶ
![](https://karnataka1news.com/wp-content/uploads/2023/02/IMG_20230203_135952-860x479.jpg)