ವಿಜಯಪುರ: ಪಿಎಸ್ಐ ಪುತ್ರನ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಎಸ್ಪಿ ಎಚ್.ಡಿ. ಆನಂದಕುಮಾರ ಮಾಹಿತಿ ನೀಡಿದರು.
ನಗರದಲ್ಲಿ ಮಾತನಾಡಿದ ಅವರು, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ಡಿಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಇನ್ನು ಪ್ರಾಥಮಿಕ ವರದಿಯಲ್ಲಿ ಹತ್ಯೆಯಾಗಿರುವ ಮುಸ್ತಕಿನ್ ಮೈಮೇಲೆ ಗಾಯದ ಗುರುತುಗಳು ಇವೆ. ಇದೊಂದು ಪಕ್ಕಾ ಪ್ಲ್ಯಾನ್ ಮಾಡಿ ಹತ್ಯೆ ಮಾಡಿದ್ದಾರೆ. ಅದಕ್ಕಾಗಿ ಆದಷ್ಟು ಬೇಗನೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು.