K1N ಡೆಸ್ಕ್: ದಿನನಿತ್ಯ ಅಡುಗೆ, ಹಲ್ವಾ ವಿವಿಧ ಸಿಹಿತಿಂಡಿ ತಯಾರಿಸುವಾಗ ಒಣದ್ರಾಕ್ಷಿ ಬಳಸುವುದು ಸರ್ವೇಸಾಮಾನ್ಯ. ಆದ್ರೇ, ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನಿರಂತರವಾಗಿ ಇದನ್ನು ಸೇವಿಸುವುದರಿಂದ ಮಲಬದ್ಧತೆ, ಹೊಟ್ಟೆ ಉಬ್ಬರ, ರಕ್ತಹೀನತೆ ಸಮಸ್ಯೆಗಳು ಕಡಿಮೆ ಆಗುತ್ತವೆ. ಒಣದ್ರಾಕ್ಷಿಯಲ್ಲಿ ನೈಸರ್ಗಿಕ ಆಂಟಿ ಆಕ್ಸಿಡೆಂಟ್ಗಳು ದೇಹದ ರಕ್ತವನ್ನು ಶುದ್ಧೀಕರಿಸುತ್ತವೆ. ಮುಖದಲ್ಲಿ ಮೂಡಿರುವ ಮೊಡವೆ ಹಾಗೂ ಅದರ ಕಲೆಗಳನ್ನು ದೂರಮಾಡುವ ಶಕ್ತಿ ಇದೆ. ಪೌಷ್ಟಿಕಾಂಶದ ಕೊರತೆಯಿಂದ ಕೂದಲು ಬೆಳ್ಳಗಾಗಿದ್ದರೆ, ನೆರೆದಿದ್ದರೆ, ಉದುರುತ್ತಿದ್ದರೆ ಒಣ ದ್ರಾಕ್ಷಿ ಸೇವನೆಯಿಂದ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸುವ ಇದು ಅಧಿಕ ರಕ್ತದ ಒತ್ತಡದ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಇದರಲ್ಲಿ ಹೆಚ್ಚಿರುವ ಪೊಟ್ಯಾಶಿಯಂ ಅಂಶ ದೇಹದ ಸೋಡಿಯಂ ಪ್ರಮಾಣವನ್ನು ತಗ್ಗಿಸುತ್ತದೆ. ಒಣ ದ್ರಾಕ್ಷಿ ಹಣ್ಣುಗಳನ್ನು ಮೊಸರಿನೊಂದಿಗೆ ಸೇವಿಸುವುದರಿಂದ ಹೆಚ್ಚಿನ ಲಾಭಗಳನ್ನು ಪಡೆಯಬಹುದು. ಹಲ್ಲು ಹುಳುಕಾಗುವುದನ್ನು ತಪ್ಪಿಸುವ ಇದು ಹಲ್ಲುಗಳನ್ನು ಬಲಪಡಿಸುತ್ತದೆ. ವಸಡಿನ ಆರೋಗ್ಯವನ್ನು ಸುಧಾರಿಸುತ್ತದೆ. ಜಗಿದು ತಿನ್ನುವುದರಿಂದ ಎನಾಮಲ್ ಗಟ್ಟಿಯಾಗುತ್ತದೆ.