ವಿಜಯಪುರ: ಬನಶಂಕರಿ ದೇವಸ್ಥಾನದಲ್ಲಿ ದೇವಿಯ ಮೇಲಿನ ಚಿನ್ನಾಭರಣ ಕಳ್ಳತನ ಮಾಡಿದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಮನೋಹರಸಿಂಗ್ ಸವಾಯ್ಸಿಂಗ್ ಹಾಗೂ ಮಹೇಂದ್ರಕುಮಾರ ಬಂಧಿತ ಆರೋಪಿಗಳು. ಇನ್ನು ನಾಲ್ವರು ಪೈಕಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಅಲ್ಲದೇ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿನ ಬನಶಂಕರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. 35 ಗ್ರಾಂ ಚಿನ್ನ ಕಳ್ಳತನ ಮಾಡಲಾಗಿತ್ತು. ಇದೀಗ್ ಚಿನ್ನ ಹಾಗೂ ಕಳ್ಳತನಕ್ಕೆ ಬಳಸಿದ ಕಾರು ವಶಕ್ಕೆ ಪಡೆಯಲಾಗಿದೆ. ಕೂಡಗಿ ಎನ್ಡಿಪಿಸಿ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ.