ವಿಜಯಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಪುರದ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ (22) ಶಿಕ್ಷೆಗೊಳಗಾದ ಆರೋಪಿ.
ಇನ್ನು 02-04-2021 ರಂದು ವಿಜಯಪುರ ನಗರದ ಗಾಂಧಿನಗರ ಬಳಿ ದನ ಮೇಯಿಸುವಾಗ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಅವರು, ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ, ಆರೋಪಿಗೆ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದರು.