ಅಗಲಿದ ಭಾರತಾಂಬೆಯ ಹೆಮ್ಮೆಯ ಪುತ್ರ; ರತನ್ ಟಾಟಾ

khushihost
ಅಗಲಿದ ಭಾರತಾಂಬೆಯ ಹೆಮ್ಮೆಯ ಪುತ್ರ; ರತನ್ ಟಾಟಾ

ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್‌ ಚೇರ್ಮನ್‌ ಆಗಿರೋ ರತನ್‌ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೀಟ್ಮೆಂಟ್​ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್​​ ಟಾಟಾ ತಮ್ಮ ಜೀವನದ ಅಂತಿಮ ಉಸಿರು ನಿಲ್ಲಿಸಿದ್ದಾರೆ.

ರತನ್​ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 86 ವರ್ಷದ ಹಿರಿಯ ಜೀವಿಗಳಾದ ರತನ್‌ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂದಿನಂತೆಯೇ ಜನರಲ್​ ಚೆಕಪ್​ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದ್ರೂ ಫಲಿಸದೆ ನಿಧನರಾಗಿದ್ದಾರೆ.

1991ರಲ್ಲಿ ಟಾಟಾ ಸನ್ಸ್‌ ಚೇರ್ಮನ್‌ ಆಗಿದ್ದ ರತನ್‌ ಟಾಟಾ 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ ಯಶಸ್ಸು ಇವರಿಗಿದೆ. ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್‌ ಕೂಡ ಇದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";