ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಶ್ರೀಸಿದ್ಧಲಿಂಗ ಮಹಾರಾಜರ ಜಾತ್ರೆ ಅಂಗವಾಗಿ ರವಿವಾರ ನಡೆದ ರಥೋತ್ಸವದಲ್ಲಿ ಗಾಲಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಓರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಲಚ್ಯಾಣ
ಗ್ರಾಮದ ನಾಗೇಂದ್ರ ಶಿವಾಜಿ ಕಟಕದೊಂಡ (39) ಮೃತಪಟ್ಟಿದ್ದಾರೆ. ರಥೋತ್ಸವದಲ್ಲಿ ಗಾಲಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ. ಈತನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ. ಇಂಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿತ್ತು.