ವಿಜಯಪುರ: ಬಿಜೆಪಿ ಸೇರ್ಪಡೆಯಾಗುವ ಉದ್ದೇಶದಿಂದ ಪೊಲೀಸ್ ಹುದ್ದೆಗೆ ಪೊಲೀಸ ಅಧಿಕಾರಿ ಬುಧವಾರ ರಾಜೀನಾಮೆ ನೀಡಿದ್ದಾರೆ. ವಿಜಯಪುರದ ನಾಗಠಾಣ ಮೀಸಲು ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷೆಯಾಗಿರುವ ಪೊಲೀಸ್ ಅಧಿಕಾರಿ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದ್ದು, ಕೌಟುಂಬಿಕ ಸಮಸ್ಯೆ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಬಾಗಲಕೋಟಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ನಾಯಕ್ ಕೆಲಸ ಮಾಡುತ್ತಿದ್ದಾರೆ. ಸಚಿವ ಗೋವಿಂದ್ ಕಾರಜೋಳ ಪುತ್ರ ಗೋಪಾಲ ಕಾರಜೋಳ ಆಕಾಂಕ್ಷೆಯಾಗಿದ್ದ ನಾಗಠಾಣ ಕ್ಷೇತ್ರಕ್ಕೆ ಪೊಲೀಸ ಅಧಿಕಾರಿ ಕಣ್ಣಿಟ್ಟಿದ್ದಾರೆ. ಅಲ್ಲದೇ, ಸದ್ಯ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಪ್ರತಿನಿಧಿಸುತ್ತಿದ್ದಾರೆ.