ಧಾರವಾಡ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಿನಾರಾಯಣಪುರ ಗ್ರಾಮದ ಬಳಿಯಲ್ಲಿ ನಡೆದಿದೆ.
ಯರಿನಾರಾಯಣಪುರದ ಮಲ್ಲಪ್ಪ ಎಂಬವರು ಇಂದು ಬೆಳಿಗ್ಗೆ ಹಾಲಿನ ಕೇಂದ್ರಕ್ಕೆ ಹಾಲು ಹಾಕಲು ಬೈಕ್ ಮೇಲೆ ಹೊರಟಿದ್ದ ಸಂದರ್ಭದಲ್ಲಿ ಇನ್ನೊಂದು ಬೈಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರವಾಗಿ ಏಟಾಗಿ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇನ್ನೊಂದು ಬೈಕ್ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುಂದಗೋಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.