ವಿಜಯಪುರ: ಹಿಜಾಬ್ ಹಾಗೂ ಕೇಸರಿ ಶಾಲ್ ಮಧ್ಯೆ ಇದೀಗ್ ಭೀಮಾತೀರದಲ್ಲಿ ಸಿಂಧೂರ ವಿವಾದ ಪ್ರತಿಧ್ವನಿಸುತ್ತಿದೆ. ವಿಜಯಪುರ ಜಿಲ್ಲೆಯಇಂಡಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಣೆಗೆ ವಿದ್ಯಾರ್ಥಿಯೋರ್ವ ಕುಂಕುಮ ಹಚ್ಚಿಕೊಂಡು ಬಂದಿದ್ದಾನೆ. ಹಣೆಗೆ ಕುಂಕುಮ ಹಚ್ಚಿಕೊಂಡು ಬಂದಂತಹ ಪದವಿ ವಿದ್ಯಾರ್ಥಿ ಗಂಗಾಧರ ಬಡಿಗೇರ ಹಾಗೂ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನು ಸ್ಥಳದಲ್ಲಿದ್ದ ಪೊಲೀಸರು ವಿದ್ಯಾರ್ಥಿಗೆ ಮನವೊಲಿಸಿ ತರಗತಿಗೆ ಕಳುಹಿಸಿಕೊಟ್ಟರು. ಅಲ್ಲದೇ, ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.