ವಿಜಯಪುರ: ಸರ್ಕಾರಿ ಕಚೇರಿಯಲ್ಲಿನ ಶ್ರೀಗಂಧ ಮರ ಕಡಿದು ಕಳ್ಳರು ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಕಚೇರಿಯ ಆವರಣದಲ್ಲಿ ಬೆಳೆದಿದ್ದ 15 ಲಕ್ಷದ ಮೌಲ್ಯದ ಶ್ರೀಗಂಧ ಮರ ಕಳ್ಳತನವಾಗಿವೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕಿದೆ. ಇಲ್ಲದೇ ಹೋದರೆ ಹೋರಾಟ ಮಾಡುವ ಎಚ್ಚರಿಕೆಯನ್ನು ಹೋರಾಟಗಾರರು ನೀಡಿದರು. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.