ವಿಜಯಪುರ: ಸರಣಿ ಮನೆ ಹಾಗೂ ಅಂಗಡಿಗಳಲ್ಲಿ ಕಳ್ಳರು ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರದ ಕನಕದಾಸ ಬಡಾವಣೆಯಲ್ಲಿ ನಡೆದಿದೆ.
ಐದು ಅಂಗಡಿ, ಒಂದು ಮನೆಯಲ್ಲಿ ಕಳ್ಳತನಗೈದು ಕಳ್ಳರು ಪರಾರಿಯಾಗಿದ್ದಾರೆ. ಗಣೇಶ ಗೌಡ ಬೇಕರಿ, ಬಿಎಸ್ ಬಿರಾದಾರ, ಅಂಜಲಿ ಹೆಲ್ತ್ ಕೇರ್, ಉಳಿದ ಅಂಗಡಿಯಲ್ಲಿ 35 ಸಾವಿರ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.