ವಿಜಯಪುರ: ನಾಡಿನ ಪ್ರಮುಖ ಹಬ್ಬ ಹಾಗೂ ರೈತನ ಸಂತಸದ ಸಮಯವನ್ನು ಎಳ್ಳು ಅಮವಾಸ್ಸೆಯಾಗಿ ಆಚರಿಸಲಾಗುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಎಲ್ಲೆಡೆ ಎಳ್ಳು ಅಮವಾಸ್ಸೆಯ ಹಬ್ಬವನ್ನು ಚರಗ ಚಲ್ಲುವ ಮೂಲಕ ಆಚರಿಸಲಾಯಿತು. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಯುವತಿಯರು, ಯುವಕರು ಹಾಗೂ ಮಹಿಳೆಯರು ಸಂಭ್ರಮದಿಂದ ಚರಗ ಚೆಲ್ಲಿದರು. ಸಜ್ಜಿರೊಟ್ಟಿ, ಶೇಂಗಾ ಹೋಳಿಗೆ ಸೇರಿದಂತೆ ಉತ್ತರ ಕರ್ನಾಟಕದ ಖ್ಯಾದ್ಯವನ್ನು ತಯಾರಿಸಿ ಜಮೀನಿಗೆ ತೆರಳಿ ಭರ್ಜರಿಯಾಗಿ ಊಟ ಸವಿದರು. ಇದಕ್ಕೂ ಮೊದಲು ಮನೆಯಿಂದ ತಂದಿದ್ದ ಅಡುಗೆಯನ್ನು ಜಮೀನಿನಲ್ಲಿ ಬನ್ನಿ ಮರಕ್ಕೆ ಪೂಜಿಸಲಾಯಿತು. ಅಲ್ಲದೆ ಸಜ್ಜಿರೊಟ್ಟಿ ಚವಳಿಕಾಯಿ ಚೋಂಗಿಬೋಲೊ ಎಂದು ಬೆಳೆಗೆಲ್ಲ ನೈವೇದ್ಯ ಅರ್ಪಿಸಲಾಯಿತು.