ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದ ಬಾಳೆ ತೋಟ್ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಹತ್ತಿರದ ಆಲೂರ ಗ್ರಾಮದಲ್ಲಿ ನಡೆದಿದೆ.
ಆಲೂರ ಗ್ರಾಮದ ರೈತ ಬಾಪುಗೌಡ ಪಾಟೀಲ ಸೇರಿದಂತೆ ನಾಲ್ಕು ಎಕರೆ ಬಾಳೆ ತೋಟ ಹಾನಿಯಾಗಿದೆ. ಅಲ್ಲದೇ, ಜಮೀನಿನ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿಯಿಂದ ಶಾರ್ಟ್ ನಿಂದಾಗಿ ಲಕ್ಷಾಂತರ ಮೌಲ್ಯದ ಬಾಳೆ ತೋಟ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ