ವಿಜಯಪುರ: ಬರದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಕಣ್ಣಲ್ಲಿ ನೀರು ಬರಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ವಾಗ್ದಾಳಿ ನಡೆಸಿದರು. ವಿಜಯಪುರದ ಜಾಲಗೇರಿಯಲ್ಲಿ ಮಾತನಾಡಿದ ಅವರು, ಭೀಕರ ಬರದ ನಡುವೆ ಹಂಪಿಯಲ್ಲಿ ಸಿಎಂ ಸಿದ್ದರಾಮಯ್ಯ ಡಾನ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅಧಿಕಾರದ ಅಹಂಕಾರದಲ್ಲಿ ಮೆರೆಯುತ್ತಿದ್ದಾರೆ. ಅಧಿಕಾರದ ದರ್ಪದಲ್ಲಿ ನಡೆಯುತ್ತಿದ್ದಾರೆ. ಜನರ ಸಮಸ್ಯೆ ಅರಿತುಕೊಳ್ಳೊದ್ರಲ್ಲಿ ವಿಫಲರಾಗಿದ್ದಾರೆ. ಸಿಎಂ ನೃತ್ಯ ಮಾಡಿದ್ದಾರೆಂದರೆ ಅವರಿಗೆ ರಾಜ್ಯದ ಜನರ ಸಮಸ್ಯೆಯ ಅರಿವಿಲ್ಲ. ಸಿದ್ದರಾಮಯ್ಯ ಅಧಿಕಾರ ನಡೆಸಬೇಕು ಅಂತಾ ಭಗವಂತನಿಗೆ ಇಚ್ಛೆ ಇಲ್ಲ. ಭಗವಂತನ ಆಶೀರ್ವಾದದಿಂದ ಸಿಎಂ ಆಗಿಲ್ಲ. ಗ್ಯಾರಂಟಿ ಕಾರ್ಡ್ ಆಶೀರ್ವಾದದ ಸಿಎಂ ಆಗಿದ್ದಾರೆ ಎಂದ ಕಟೀಲ್ ವಾಗ್ದಾಳಿ ನಡೆಸಿದರು.