ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಈ ಬಾರಿ ಸಿದ್ದೇಶ್ವರ ಜಾತ್ರೆ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಹೇಳಿದರು. ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮದ್ದು ಸುಡುವ ಕಾರ್ಯಕ್ರಮ, ಜಾನುವಾರು ಜಾತ್ರೆ, ಮಳಿಗೆಗಳ ಸ್ಥಾಪನೆ ನಿಷೇಧಿಸಲಾಗಿದೆ.
ಕೇವಲ ನಂದಿಕೋಲು ಮೆರವಣಿಗೆ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ಮಾತ್ರ ಆಚರಿಸಲಾಗುತ್ತಿದೆ. ಜನವರಿ. 12 ರಂದು ಗೋಪೂಜೆಯೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ. ಜ. 13 ರಂದು ಮಧ್ಯಾಹ್ನ 12.30 ಕ್ಕೆ ನಂದಿ ಧ್ವಜಗಳ ಪೂಜೆ ನೆರವೇರಲಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ನಡೆಯಲಿದ್ದು, ಜನವರಿ 18ರ ವರೆಗೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.