ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಮತ್ತೋರ್ವ ಬಲಿ ಆಗಿರುವ ಘಟನೆ ನಡೆದಿದೆ. ವಿಜಯಪುರ ತಾಲ್ಲೂಕಿನ ಮದಭಾವಿ ಎಲ್ ಟಿ 2ದಲ್ಲಿ ಸಿಡಿಲಿಗೆ ಲಕ್ಷ್ಮಣ ಸೋಮಲು ರಾಠೋಡ್ (72) ಬಲಿಯಾದ ರೈತ. ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಿ ಮನೆಗೆ ಬರುವಾಗ ಈ ದುರ್ಘಟನೆ ಆಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಲ್ಲದೇ, ಈವರೆಗೆ ವಿಜಯಪುರ ಜಿಲ್ಲೆಯಲ್ಲಿ ನಾಲ್ಕು ಜನ ಸಿಡಿಲಿಗೆ ಸಾವನ್ನಪ್ಪಿದ್ದಾರೆ.