ವಿಜಯಪುರ: ಒಂಟಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಅಂದರ್ ಮಾಡಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು.
ವಿಜಯಪುರ ನಗರದಲ್ಲಿ ನಡೆದ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಕಾಂತ್ ಹರಿಜನ್, ಭೀಮು ಪಡಕೋಟಿ, ಆಕಾಶ ಕಲ್ಲವ್ವಗೋಳ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ 12.50 ಲಕ್ಷ ಮೌಲ್ಯದ 250 ಗ್ರಾಂ ಚಿನ್ನ, 36 ಸಾವಿರ ಮೌಲ್ಯದ 600 ಗ್ರಾಂ ಬೆಳ್ಳಿ, 5.50 ಲಕ್ಷ ಮೌಲ್ಯದ ಒಂದು ಕಾರು, ಕೃತ್ಯಕ್ಕೆ ಬಳಿಸಿದ ಕಬ್ಬಿಣದ ರಾಡ್, ಸುತ್ತಿಗೆ ಸೇರಿದಂತೆ 18.36 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿಗೈದಿದ್ದಾರೆ ಎಂದರು.
ಕಾರ್ಯಾಚರಣೆ ಹೀಗಿತ್ತು..
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಸೋಮನಾಥ ರುದ್ರಗೌಡ ಬಗಲಿ ಮನೆಯಲ್ಲಿ 9 ತೊಲೆ 3 ಗ್ರಾಂ ಚಿನ್ನ ಕದ್ದು ಮಾರಾಟಕ್ಕೆ ಹೋಗುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಆರೋಪಿಗಳ ಬಂಧನ ಮಾಡಿದ್ದಾರೆ…
ಮತ್ತೊಂದೆಡೆ ಬೈಕ್ಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಜೀರ್ ಸಾಹೇಬಲಾಲ್ ಜಾತಗಾರ (26) ಹಾಗೂ ಅಭಿನಾಶ ಮದಾರಸಾಬ್ ವಜ್ಜಣ್ಣವರ (20) ಬಂಧಿತ ಆರೋಪಿಗಳು. ಇನ್ನು ಬಂಧಿತ ಆರೋಪಿಗಳಿಂದ 3.60 ಲಕ್ಷ ಮೌಲ್ಯದ 7 ಬೈಕ್ಗಳನ್ನು ಜಪ್ತಿಗೈದಿದ್ದಾರೆ. ಈ ಕುರಿತು ಗೋಳಗುಮ್ಮಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಎಸ್ಪಿ ಶಂಕರ ಮಾರಿಹಾಳ, ಡಿಎಸ್ಪಿ ಸಿದ್ಧೇಶ್ವರ ಕೃಷ್ಣಾಪೂರ, ಸಿಪಿಐ ಸಂಗಮೇಶ ಪಾಲಭಾವಿ, ಪಿಎಸ್ಐ ಸೀತಾರಾಮ ಲಮಾಣಿ ಸೇರಿದಂತೆ ಸಿಬ್ಬಂದಿಗಳು ಇದ್ದರು.