ಕಾಳೆ ಹತ್ಯೆ ಪ್ರಕರಣ ! ನಾಲ್ವರು ಸೇರಿ ಆರು ಜನರ ಬಂಧನ

Karnataka 1 News
ಕಾಳೆ ಹತ್ಯೆ ಪ್ರಕರಣ ! ನಾಲ್ವರು ಸೇರಿ ಆರು ಜನರ ಬಂಧನ
Oplus_0

ವಿಜಯಪುರ: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ ಕಾಳೆ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ನಗರದ ಎಸ್ ಎಸ್ ಕಾಂಪ್ಲೆಕ್ಸ್‌ನಲ್ಲಿ ಜುಲೈ 14ರಂದು ಆರೋಪಿಗಳು ಹತ್ಯೆಗೈದು ಪರಾರಿಯಾಗಿದ್ದರು. ಮೊನ್ನೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ನೀಡಿ ಪೊಲೀಸರು ಬಂಧಿಸಿದ್ದರು. ಇದೀಗ್ ಗೌತಮ ಆಲಮೇಲಕರ, ನಾರಾಯಣ ಜಾಧವ್, ಬಸವರಾಜ್ ಮುನ್ನಾಳ, ಪ್ರಜ್ವಲ ಹಳಿಮನಿ ಬಂಧಿತರು. ಮೊನ್ನೆ ಆಕಾಶ ಕಲ್ಲವ್ವಗೋಳ ಹಾಗೂ ಸುದೀಪ ಬಗಲಿ ಅಂದರ್ ಮಾಡಲಾಗಿತ್ತು. ಇದರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರು. ಬಂಧಿತರಿಂದ ಒಂದು ಕಂಟ್ರಿ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳು, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";