ವಿಜಯಪುರ: ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಶಿಕಾರಿಖಾನೆಯಲ್ಲಿ ನಡೆದಿದೆ.
ಅಶನಾನ್ ಪ್ರಕಾಶ ಮಿರ್ಜಿ(22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಇನ್ನು ಯುವಕನ ತಂದೆ ಮಾಜಿ ಮಹಾನಗರ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ನಿಂದ ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಗುಂಡು ಹಾರಿಸಿಕೊಂಡಿದ್ದಾನೆ. ಪ್ರಕಾಶ್ ಮಿರ್ಜಿ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲನ್ನು ತೆಗೆದುಕೊಂಡು ಬೆಡ್ ರೂಂಗೆ ಹೋಗಿ ತಲೆಗೆ ಹೊಡೆದುಕೊಂಡಿದ್ದಾನೆ. ಸ್ಥಳಕ್ಕೆ ಎಪಿಎಂಸಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.