ವಿಜಯಪುರ: ಸರಣಿ ಅಪಘಾತದಲ್ಲಿ ಮೂವರು ಅಸುನೀಗಿದ್ದಾರೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು.
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇನ್ನು ಬಸ್ನ್ನು ಓವರ್ ಟೆಕ್ ಮಾಡಲು ಹೋಗಿ ಮುಂದೆ ಬರುವ ಕಾರಿಗೆ ಡಿಕ್ಕಿಯಾಗಿದೆ. ತದನಂತರ ಕಾರಿನ ಹಿಂದೆ ಬರುತ್ತಿದ್ದ ಬಸ್ ಡಿಕ್ಕಿ ರಭಸಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೇ, ಗಣೇಶ ಹಬ್ಬಕ್ಕೆ ಊರಿಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಅದಕ್ಕಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಎಸ್ಪಿ ಮನವಿ ಮಾಡಿದರು.