ವಿಜಯಪುರ: ಕಳ್ಳರು ಶಾಲೆಯ ಬೀಗ ಮುರಿದು ಶಾಲೆಯಲ್ಲಿದ್ದ ಮೊಟ್ಟೆಗಳನ್ನು ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ರೂಡಗಿ ಗ್ರಾಮದಲ್ಲಿ ನಡೆದಿದೆ. ರೂಡಗಿ ಪ್ರಾಥಮಿಕ ಶಾಲೆಯ ಬೀಗ ಮುರಿದು ಕೊಠಡಿಯಲ್ಲಿದ್ದ 20ಮೊಟ್ಟೆಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಶಾಲೆಯ ಮುಖ್ಯೋಪಾದ್ಯಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.