ವಿಜಯಪುರ: ಸಮರ್ಪಕ ಬಸ್ ಸೇವೆಗೆ ಆಗ್ರಹಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದ ಬಸ್ ನಿಲ್ದಾಣದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಶಾಲಾಕಾಲೇಜಿನ ವೇಳೆ ಬಸ್ ಸೌಲಭ್ಯ ಇಲ್ಲ. ಶಾಲಾ ಕಾಲೇಜು ತರಗತಿಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳ ಘೋಷಣೆ ಕೂಗಿದರು. ಅದಕ್ಕಾಗಿ ಸೂಕ್ತ ಬಸ್ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.