ವಿಜಯಪುರ: ವ್ಯಕ್ತಿಯ ಶವವೊಂದು ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಬಬಲೇಶ್ವರ ನಾಕಾ ಬಳಿಯ ನಿವಾಸಿ ಸುರಪ್ಪ ಎಂಬುವವರ ಶವ ಪತ್ತೆಯಾಗಿದೆ.
ಇನ್ನು ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.